ಆಟಿಡೊಂಜಿ ದಿನ ಕಾರ್ಯಕ್ರಮ

ಬಂದಲೆ-ಪಚ್ಚನಾಡಿ ಮೂಡುಮನೆ ಗುತ್ತು ಶ್ರೀ ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನದ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಭಾಗವಹಿಸಿ ವಿವಿಧ ಕ್ಷೇತ್ರಗಳ ಸಾಧಕರನ್ನು ಮತ್ತು ಯುವ ಪ್ರತಿಭೆಗಳನ್ನು ಸನ್ಮಾನಿಸಿ, ಅಶಕ್ತರಿಗೆ ಸಹಾಯಧನ ಹಾಗೂ ಅರ್ಹ ಫಲಾನುಭವಿಗಳಿಗೆ ಅಕ್ಕಿ ವಿತರಿಸಿದರು.

ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಸ್ಥಳೀಯ ಕಾರ್ಪೊರೇಟರ್ ಸಂಗೀತಾ ನಾಯಕ್, ಕ್ಷೇತ್ರದ ಪ್ರಮುಖರಾದ ಸತೀಶ್ ಬಂದಲೆ ಹಾಗೂ ಗಣ್ಯರು, ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply