ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ-ಶಾಸಕ ರಘುಪತಿ ಭಟ್ ಅಭಿನಂದನೆ

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಆದಿ ಉಡುಪಿಯಿಂದ ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಕೇಂದ್ರ ಹಸಿರು ನಿಶಾನೆ ತೋರಿಸಿದ್ದು, ಈ ಹೆದ್ದಾರಿ ಹಾದು ಹೋಗುವ ಪರ್ಕಳದಿಂದ ಹಿರಿಯಡ್ಕ ವರೆಗೆ ಚತುಷ್ಪಥ ಹಾಗೂ ಹಿರಿಯಡ್ಕದಿಂದ ಹೆಬ್ರಿ ವರೆಗೆ ದ್ವಿಪಥವಾಗಿ ಅಭಿವೃದ್ಧಿ ಪಡಿಸಲು ಒಟ್ಟು ರೂ. 350.00 ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಅನುಮೋದನೆ ನೀಡಲಾಗಿದೆ

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಮಲ್ಪೆಯಿಂದ ಹೆಬ್ರಿವರೆಗೆ ಸಮಗ್ರ ಅಭಿವೃದ್ಧಿಯ ಯೋಜನಾ ವರದಿ ಸಿದ್ಧಪಡಿಸಿ ಅನುಮೋದನೆಗಾಗಿ ದಿನಾಂಕ 23-03-2021ರಂದು ಸಂಸದೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವರಾದ ಶ್ರೀಯುತ ನಿತಿನ್ ಗಡ್ಕರಿ ಯವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
 
ಉಡುಪಿ ಜಿಲ್ಲೆಯ ಬಹು ಬೇಡಿಕೆಯಾಗಿರುವ ಈ ಪ್ರಮುಖ ಹೆದ್ದಾರಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುತುವರ್ಜಿವಹಿಸಿ ಕೇಂದ್ರ ಸಚಿವರನ್ನು ಭೇಟಿ ಮಾಡಿಸಿ ಹೆದ್ದಾರಿ ಅಭಿವೃದ್ಧಿಯ ಪ್ರಾಮುಖ್ಯತೆಯ ವಸ್ತುಸ್ಥಿತಿಗಳನ್ನು ಮನವರಿಕೆ ಮಾಡಿ ನಂತರ ಯೋಜನೆಗೆ ಅನುಮೋದನೆ ದೊರಕುವವರೆಗೆ ನಿರಂತರವಾಗಿ ಪ್ರಯತ್ನಿಸಿ ಶ್ರಮವಹಿಸಿದ ಉಡುಪಿ-ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಯೋಜನೆಗೆ ಅನುಮೋದನೆ  ನೀಡಿದ ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀಯುತ ನಿತಿನ್ ಗಡ್ಕರಿ ಅವರಿಗೆ ಶಾಸಕ ರಘುಪತಿ ಭಟ್ ಅವರು ಅಭಿನಂದನೆಯನ್ನು ಸಲ್ಲಿ​​ಸಿದ್ದಾರೆ.

 
 
 
 
 
 
 
 
 
 
 

Leave a Reply