ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.40 ರಿಂದ ಶೇ.5.02ಕ್ಕೆ ಇಳಿಕೆ ಯಾಗಿದೆ. ಲಾಕ್ಡೌನ್ ಮುಂದುವರಿದರೆ ಜನರಿಗೆ ಕಷ್ಟವಾಗುತ್ತದೆ. ಹೀಗಾಗಿ ಅನ್ಲಾಕ್ ಪ್ರಕ್ರಿಯೆ ಆರಂಭಿಸಬೇಕು. ಇಲ್ಲದಿದ್ದರೆ ಸರ್ಕಾರ ದ ಮೇಲೆ ಜನರು ಬೇಸರ ಗೊಳ್ಳುತ್ತಾರೆ. ಸಂಕಷ್ಟ ದಲ್ಲಿರುವ ಜನರು ದಂಗೆ ಏಳುವ ಅಪಾಯವಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ, ಉಸ್ತುವಾರಿ ಸಚಿವ ಮತ್ತು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಶೇ.02 ಹೆಚ್ಚು ಇರುವ ಕಾರಣಕ್ಕೆ ಲಾಕ್ಡೌನ್ ಮುಂದು ವರಿಸುವುದು ಸರಿಯಲ್ಲ. ಜನರ ತ್ಯಾಗದಿಂದ ಈ ಸಾಧನೆ ಸಾಧ್ಯವಾಗಿದೆ.