ಜನ ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ – ಪ್ರೀತಿಯಿಂದ ಜನರ ಕೆಲಸ ಮಾಡಿ ವಿಶ್ವಾಸ ಉಳಿಸಿಕೊಳ್ಳಬೇಕು –  ಶಾಸಕ ರಘುಪತಿ ಭಟ್ ಕಿವಿಮಾತು

ಜನರ ಬಳಿಗೆ ತೆರಳಿ ಕೆಲಸ ಮಾಡುವಲ್ಲಿ ಪಂಚಾಯತ್ ಸದಸ್ಯರ ಜವಾಬ್ದಾರಿ ಹೆಚ್ಚಿನದ್ದಾಗಿದ್ದು ಸಮಸ್ಯೆಯ ಪರಿಹಾರಕ್ಕಾಗಿ ತಮ್ಮ ಬಳಿಗೆ ಬರುವ ಜನರಲ್ಲಿ ಪ್ರೀತಿಯಿಂದ ವ್ಯವಹರಿಸಿ ಅವರ ಕೆಲಸಗಳನ್ನು ದಕ್ಷತೆಯಿಂದ ಮಾಡಿಕೊಟ್ಟು ಜನರ ವಿಶ್ವಾಸ ಉಳಿಸಿ ಕೊಳ್ಳಬೇಕು ಎಂದು ಶಾಸಕ ರಘುಪತಿ ಭಟ್ ನೂತನ ಪಂಚಾಯತ್ ಸದಸ್ಯರಿಗೆ ಕಿವಿಮಾತು ಹೇಳಿದರು.
ಭಾರತೀಯ ಜನತಾ ಪಾರ್ಟಿ ಉಡುಪಿ ವಿಧಾನಸಭಾ ಕ್ಷೇತ್ರ ಉಡುಪಿ ನಗರ ಮತ್ತು ಗ್ರಾಮಾಂತರ ಬಿಜೆಪಿ ಆಶ್ರಯದಲ್ಲಿ ಇಂದು ಭಾನುವಾರ ಬ್ರಹ್ಮಾವರ ಉನ್ನತಿ ಸಭಾಭವನದಲ್ಲಿ ನಡೆದ “ಗ್ರಾಮ ಪಂಚಾಯತ್ ಚುನಾವಣೆಯ ಚುನಾಯಿತ ಸದಸ್ಯರ, ಅಭ್ಯರ್ಥಿಗಳ ಹಾಗೂ ಕಾರ್ಯಕರ್ತರ ಅಭಿನಂದನಾ ಸಮಾವೇಶದಲ್ಲಿ” ಮಾತನಾಡಿದರು.

ಕೇಂದ್ರದಲ್ಲಿ ರಾಜ್ಯದಲ್ಲಿ ಸ್ಥಳೀಯ ಆಡಳಿತದಲ್ಲಿ ಬಿಜೆಪಿ ಇರುವುದರಿಂದ ಜನರ ನಿರೀಕ್ಷೆಯೂ ನಮ್ಮ ಮೇಲಿದೆ ನಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದಾರೆ ಅವರ ವಿಶ್ವಾಸವನ್ನು ಉಳಿಸುವ ಜೊತೆಯಲ್ಲಿ ಪಕ್ಷ ನೀಡುವ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶಂಕರ್ ಪೂಜಾರಿ. 

ಬ್ರಹ್ಮಾವರ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಗ್ರಾಮಾಂತರ ಬಿಜೆಪಿ ಪ್ರಭಾರಿಗಳಾದ ಸದಾನಂದ ಬಳ್ಕೂರ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಹೇರೂರು, ವಿಶು ಕುಮಾರ್ ಕಲ್ಯಾಣಪುರ ಉಪಸ್ಥಿತ ರಿದ್ದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್  ಸ್ವಾಗತಿಸಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್ ಧನ್ಯವಾದವಿತ್ತರು. ಕಮಲಾಕ್ಷ್ ಹೆಬ್ಬಾರ್ ನಿರೂಪಿಸಿದರು.
 
 
 
 
 
 
 
 
 
 
 

Leave a Reply