ಕುಂದಾಪುರ : ಸೌತ್ ಕೆನರಾ ಪೋಟೋಗ್ರಾಫರ್ ಅಸೋಸಿಯೇಶನ್ (ರಿ.) ದ.ಕ-ಉಡುಪಿ ಜಿಲ್ಲೆ ಕುಂದಾಪುರ-ಬೈಂದೂರು ವಲಯ ಇವರ ನೇತೃತ್ವದಲ್ಲಿ ಐಶ್ವರ್ಯ ಮೀಡಿಯಾ ಮತ್ತು ಸ್ಟುಡಿಯೋ ಬೀಜಾಡಿ ಇವರ ಪ್ರಾಯೋಜಕತ್ವದಲ್ಲಿ ಕನಾ೯ಟಕ ರಾಜ್ಯ ಅಗ್ನಿಶಾಮಕ ಮತ್ತು ತುತು೯ ಸೇವೆ, ಅಗ್ನಿಶಾಮಕ ಠಾಣೆ ಕುಂದಾಪುರ ಮತ್ತು ಕಾಳಾವರ ವರದರಾಜ ಎಮ್ ಶೆಟ್ಟಿ ಸರಕಾರಿ ಪ್ರಥಮ ದಜೆ೯ ಕಾಲೇಜು, ಎನ್ಎಸ್ಎಸ್ ಘಟಕ ಕೋಟೇಶ್ವರ ಇವರ ಸಹಯೋಗದೊಂದಿಗೆ ಅ.13ರಂದು ಬೆಳಿಗ್ಗೆ 10.30ಕ್ಕೆ ಕೋಟೇಶ್ವರ ಎಸ್ ಕೆವಿಎಂಎಸ್ ಸರಕಾರಿ ಪ್ರಥಮ ದಜೆ೯ ಕಾಲೇಜಿನಲ್ಲಿ ವಿಶ್ವ ಪ್ರಕೃತಿ ವಿಕೋಪ ನಿಯಂತ್ರಣ ದಿನಾಚರಣೆ ಜರುಗಲಿದೆ.
ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್ ಕೆ ಪಿ ಎ ಕುಂದಾಪುರ-ಬೈಂದೂರು ವಲಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ಪ್ರಾಂಶುಪಾಲ ರಾಜೇಂದ್ರ ನಾಯಕ್ ಆಪತ್ಭಾಂದವರನ್ನು ಸನ್ಮಾನಿಸಲಿದ್ದಾರೆ.
ಕುಂದಾಪುರ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಬಾಬು ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ಮತ್ತು ಪ್ರಾತ್ಯಕ್ಷತೆಯನ್ನು ನಡೆಸಿಕೊಡಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.