ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

ಆಗಸ್ಟ್ 5ರಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ದ.ಕ. ಜಿಲ್ಲೆಯಲ್ಲಿ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಈ ನಿಯಮ ಅನ್ವಯವಾಗಲಿದೆ. 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ವಿನಾಯಿತಿ ನೀಡಲಾಗಿದೆ. ಪುರುಷ ಹಿಂಬದಿ ಸವಾರರಿಗೆ ಈ ನಿಯಮ ಅನ್ವಯವಾಗಲಿದೆ ಎಂದವರು ಸ್ಪಷ್ಟ ಪಡಿಸಿದರು. ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆ ಮಾಡುತ್ತಾರೆ.

ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತದೆ. ಬೇರೆ ರಾಜ್ಯಗಳಲ್ಲೂ ಈ ನಿಯಮ ಜಾರಿ ಮಾಡಲಾಗಿತ್ತು.  ಆದರೆ ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು, ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು

 
 
 
 
 
 
 
 
 
 
 

Leave a Reply