ಬಸ್ ಡಿಕ್ಕಿ ~ಬೈಕ್ ಸವಾರ ಯುವಕ ವಿಜಯ್‌ ಸ್ಥಳದಲ್ಲೇ ಸಾವು

ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಜೆ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್‌ ಸಮೀಪ ನಡೆದಿದೆ.
ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಜೆ ಬೆಳ್ತಂಗಡಿಯ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್‌ ಸಮೀಪ ನಡೆದಿದೆ.

ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್‌ (25) ಮೃತ ಯುವಕ. ಸಹ ಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್‌ (25} ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯ್ ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ ಬಂಟ್ವಾಳದಲ್ಲಿರುವ ಮನೆ ಕಡೆ ಇಬ್ಬರೂ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್ ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ಕಾರಣವಾದ ಬಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
 
 
 
 
 
 
 
 
 
 
 

Leave a Reply