ಉಡುಪಿಯಿಂದ ಲಡಾಖ್ ಗೆ ಬೈಕ್ ರೈಡ್

 ಆಜಾದಿ ಕಾ ಅಮೃತ ಮಹೋತ್ಸವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ 8 ವರ್ಷದ ಕೇಂದ್ರ ಸರಕಾರದ ಆಡಳಿತದ ಸಂಭ್ರಮಾಚರಣೆ ಸಂದರ್ಭದಲ್ಲಿ ನಮೋ ಗೆಳೆಯರ ಬಳಗ, ಉಡುಪಿ ಹಾಗೂ ರಘುಪತಿ ಭಟ್ ಅಭಿಮಾನಿ ಬಳಗ ದವರು 6 ಬೈಕ್ ನಲ್ಲಿ 11 ಜನ “ರೈಡ್ ಟು ಲಡಾಖ್” ಬೈಕ್ ರೈಡ್ ಹಮ್ಮಿಕೊಂಡಿದ್ದು, ಇಂದು ದಿನಾಂಕ 25-06-2022 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿ ಶಾಸಕರಾದ ಕೆ. ರಘುಪತಿ ಭಟ್ ರವರು ಚಾಲನೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply