ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ರಾಜ್ಯ ಸರಕಾರ ಮತ್ತೆ ಮುಗ್ಗರಿಸಿದ್ದು, ಪರಿಷ್ಕರಣೆಯ ವೇಳೆಯಲ್ಲಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟು, ಕನ್ನಡ ಪಠ್ಯದೊಳಗೆ ಸೇರ್ಪಡೆಗೊಳಿಸಿದ್ದು ಇದು ಸಮಾಜ ಭಾಂದವರಿಗೆ ಅತೀವ ನೋವನ್ನುಂಟು ಮಾಡಿದೆ.
ಈ ವಿಚಾರದ ಬಗ್ಗೆ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಮಾಜದ ಸಂಘ ಸಂಸ್ಥೆಗಳು ಮತ್ತು ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರಮುಖರ ಉಪಸ್ಥಿತಿಯಲ್ಲಿ ನಡೆಸಿದ ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು.
ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸಿದ ಬಿಲ್ಲವರು ಸಭೆಯಲ್ಲಿ ಸರಕಾರದ ನಿಲುವನ್ನು ವಿರೋಧಿಸಲಾಯಿತು.
ಈ ಕುರಿತಾಗಿ ದಿನಾಂಕ 08.07.2022 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಕಾಯಿನ್ ( coin ) ಸರ್ಕಲ್ ನಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಭಾಗಗಳ ಬಿಲ್ಲವರು ಜೊತೆ ಸೇರಿ, ಅಲ್ಲಿಂದ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಪಠ್ಯ ಪರಿಷ್ಕರಣೆಯಲ್ಲಾದ ಬದಲಾವಣೆಯನ್ನು ಸರಿಪಡಿಸಿ, ಹಿಂದಿನಂತೆ ಸಮಾಜ ವಿಜ್ಞಾನ ಪಠ್ಯ ಕ್ರಮದಲ್ಲೇ ಬ್ರಹ್ಮಶ್ರೀ ನಾರಾಯಣ ಗುರುಗಳ ಪಾಠವನ್ನು ಸೇರ್ಪಡೆಗೊಳಿಸುವಂತೆ ಮನವಿ ಮಾಡಲಾಗುವುದು.