ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶಗಳನ್ನು ನೀಡುತ್ತಾ ಬಂದಿರುವ ಪಕ್ಷ ಬಿಜೆಪಿ. ಸೇವೆಯೇ ಸಂಘಟನೆ ಎಂಬ ವಿಶ್ವನಾಯಕ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಚುನಾವಣಾ ಗೆಲುವಿನ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳನ್ನು ಜನ ಮಾನಸಕ್ಕೆ ತಲುಪಿಸುವುದು ಅಗತ್ಯ. ಮಂಡಲ, ಶಕ್ತಿ ಕೇಂದ್ರ, ಗ್ರಾಮ ಪಂಚಾಯತ್ ಹಾಗೂ ಬೂತ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಪಕ್ಷವನ್ನು ಸದೃಢಗೊಳಿಸಬೇಕು. ಬೂತ್ ಮಟ್ಟದಲ್ಲಿ ಪಂಚರತ್ನ ಸಮಿತಿ ರಚನೆ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಕುಟುಂಬ ಮಿಲನ ಮುಂತಾದ ಸಕಾರಾತ್ಮಕ ಚಟುವಟಿಕೆಗಳ ಮೂಲಕ ಮುಂಬರಲಿರುವ ಚುನಾವಣೆಯಲ್ಲಿ ಸಂಘಟನಾತ್ಮಕ ಶಕ್ತಿಯಿಂದ ಇಡೀ ಗ್ರಾಮ ಪಂಚಾಯತ್ಗಳಲ್ಲಿ ಗೆಲುವು ಸಾಧಿಸುವ ಪಣ ತೊಡಬೇಕು ಎಂದು ಅವರು ಹೇಳಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಯಶಸ್ವಿಯಾಗಿ ನಡೆದು ಆದರ್ಶ ಪ್ರಾಯವೆನಿಸಿದೆ. ಸಂಘಟನಾತ್ಮಕವಾಗಿ ಮುಂದುವರಿದ ಉಡುಪಿ ಜಿಲ್ಲೆಯ ಎಲ್ಲಾ ಸ್ತರಗಳಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಆಡಳಿತದ ಚುಕ್ಕಾಣಿ ಹಿಡಿದಿರುವುದು ಹೆಮ್ಮೆಯ ವಿಚಾರ. ಹಿರಿಯರು ತ್ಯಾಗ, ಪರಿಶ್ರಮದಿಂದ ಕಟ್ಟಿ ಬೆಳಿಸಿರುವ ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಮೇಲಿದೆ. ಬಿಜೆಪಿ ಮಂಗಳೂರು ವಿಭಾಗವನ್ನು ಮಾದರಿ ವಿಭಾಗವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಮಾರ್ಗದರ್ಶನ ಹಾಗೂ ಸಹಕಾರ ಅಗತ್ಯ ಎಂದರು.
ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ| ವಿ.ಎಸ್. ಆಚಾರ್ಯ ಕಾಲದಿಂದಲೂ ಉಡುಪಿ ಜಿಲ್ಲೆ ಬಿಜೆಪಿಯ ಪಾರಮ್ಯದ ಜಿಲ್ಲೆ ಎಂಬ ಹಿರಿಮೆ ಗಳಿಸಿದೆ. ಮುಂಬರಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆ ಯಾದ್ಯಂತ 130ಕ್ಕೂ ಮಿಕ್ಕಿ ಗ್ರಾಮ ಪಂಚಾಯತ್ಗಳನ್ನು ಗೆಲ್ಲುವ ಗುರಿ ಇದೆ. ರಾಜ್ಯ ಕಾರ್ಯಕಾರಿಣಿಯನ್ನು ಉಡುಪಿಯಲ್ಲಿ ಆಯೋಜಿಸುವರೆ ಸದವಕಾಶವನ್ನು ನೀಡುವ ಜೊತೆಗೆ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಿಗೆ ಪೂರಕವಾಗುವಂತೆ ಜಿಲ್ಲಾ ಕಛೇರಿಯ ಕಟ್ಟಡವನ್ನು ಇನ್ನೊಂದು ಅಂತಸ್ತಿಗೆ ವಿಸ್ತರಿಸಿ ವಿಸ್ತರಿಸಿ ಸಭಾಂಗಣ ನಿರ್ಮಿಸುವ ಯೋಜನೆಗೆ ರಾಜ್ಯದ ಸಹಕಾರ ಅಗತ್ಯ ಎಂದರು.