ಆಸ್ಪತ್ರೆಗಳಲ್ಲಿ ತೀವ್ರವಾದ ಆಕ್ಸಿಜನ್ ಕೊರತೆಯಿಂದ ಕೊರೊನಾ ರೋಗಿಗಳಿಗೆ ಆಗುತ್ತಿರುವ ತೊಂದರೆ ನಿವಾರಣೆಯ ಪ್ರಯುಕ್ತ ದೇಶದ ಗೌರವಾನ್ವಿತ ಪ್ರಧಾನಿ ಶ್ರೀಯುತ ನರೇಂದ್ರ ಮೋದಿಜಿಯವರ ಸೇವಾಹಿ ಸಂಘಟನ್ ಧ್ಯೇಯ ವಾಕ್ಯದಡಿಯಲ್ಲಿ ಭಾ.ಜ.ಪ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ಜಿಲ್ಲಾಧ್ಯಕ್ಷರಾದ ಸುರೇಂದ್ರ ಪಣಿಯೂರು ಇವರ ಆದೇಶದ ಮೇರೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ಉಪಾಧ್ಯಕ್ಷರಾದ ದಿನೇಶ್ ಎರ್ಮಾಳ್ ಇವರ ಕೊಡುಗೆಯಾಗಿ ಆಕ್ಸಿಮೀಟರ್ ಗಳನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಲ್ಲಿಯ ವೈದ್ಯಾಧಿಕಾರಿಗಳಾದ ಡಾ|| ರಾಜಶ್ರೀ ಇವರಿಗೆ ಹಸ್ತಾಂತರಿಸಲಾಯಿತು.