ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನಾಚಾರಣೆ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಅಭಿಯಾನದ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಮೋ ರಸ ಪ್ರಶ್ನೆ ಸ್ಪರ್ಧೆ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಯುವಮೋರ್ಚಾ ಮುಂದಾಗುವಂತೆ ಕರೆ ನೀಡಿದರು.
ಸ್ಪರ್ಧೆಯ ವಿಜೇತರಾದ ಪ್ರಥಮ ಬಹುಮಾನ ಡಾ ಅನಂತ ಪ್ರಭು ಮತ್ತು ತಂಡ, ದ್ವಿತೀಯ ಬಹುಮಾನ ಪ್ರವೀಣ್ ಯಕ್ಷಿಮಠ ಮತ್ತು ತಂಡ, ತೃತೀಯ ಬಹುಮಾನ ಸಂದೇಶ್ ಪ್ರಭು ಮತ್ತು ವಿಜಯರಾಜ್ ರವರಿಗೆ ಪ್ರಶಸ್ತಿ ಪತ್ರದೊಂದಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ವೀಣಾ ಎಸ್ ಶೆಟ್ಟಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ಉದ್ಯಾವರ, ಅಭಿರಾಜ್ ಸುವರ್ಣ, ಕಾರ್ಯಕ್ರಮ ಸಂಯೋಜಕ ಸುಹಾಸ್ ಶೆಟ್ಟಿ ಮಟ್ಲುಪಾಡಿ, ಕಾರ್ಯಕಾರಿಣಿ ಸದಸ್ಯ ರಕ್ಷಿತ್ ಪೂಜಾರಿ ಯುವಮೋರ್ಚಾ ಕಾಪು ಮಂಡಲ ಅಧ್ಯಕ್ಷರಾದ ಸಚಿನ್ ಸುವರ್ಣ, ಉಪಸ್ಥಿತರಿದ್ದರು. ಕೋಶಾಧಿಕಾರಿ ಮಟ್ಟು ಯತೀಶ್ ಕೋಟ್ಯಾನ್ ನಿರೂಪಿಸಿದರು.