ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯದರ್ಶಿ ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳ ಚುನಾವಣೆಯ ಸಹಪ್ರಭಾರಿ ಶ್ರೀ ಅರವಿಂದ ಮೆನನ್ ಅವರು ಉಡುಪಿ ಶ್ರೀಕೃಷ್ಣ ಮಠವನ್ನು ಸಂದರ್ಶಿಸಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು. ಈ ಸಂದರ್ಭ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿದರು, ಪ್ರಮುಖರಾದ ಅಕ್ಷಯ್ ಶೆಟ್ಟಿ ,ಬಿಜು , ಗುರುರಾಜ್ ಭಟ್ ಮತ್ತಿತರರು ಉಪಸ್ಥಿತರಿದ್ದರು.