ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್

ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚದ ವತಿಯಿಂದ ನರೇಂದ್ರ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾರ್ಥಕ ಸೇವೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಬಿಜೆಪಿ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು ನೆರವೇರಿಸಿ ಶುಭಹಾರೈಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನರೇಂದ್ರ ಮೋದಿ ಸರಕಾರದ ಹತ್ತು ಹಲವು ಯೋಜನೆಗಳ ಮಾಹಿತಿ ನೀಡಿ ಮೋದೀಜಿಯವರಿಗೆ ಶಕ್ತಿ ತುಂಬಲು ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸಿದರು. ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚ ಅಧ್ಯಕ್ಷರಾದ ಗೋಪಾಲ ಕಳಂಜ, ಬೈಂದೂರು ಮಂಡಲ ಎಸ್ ಸಿ ಮೋರ್ಚ ಅಧ್ಯಕ್ಷರಾದ ಚಂದ್ರ ಪಂಚವಟಿ, ಕಾಪು ಮಂಡಲ ಎಸ್ ಸಿ‌ ಮೋರ್ಚ ಉಪಾಧ್ಯಕ್ಷರಾದ ಕ್ರಷ್ಣ ಕಂಚಿನಡ್ಕ ಹಾಗು ಕಾರ್ಯಕ್ರಮ ಆಯೋಜನೆ ಮಾಡಿದ ಜಿಲ್ಲಾ ಎಸ್ ಸಿ ಮೋರ್ಚದ ಪ್ರಧಾನ ಕಾರ್ಯದರ್ಶಿ ಸದಾನಂದ ಕರ್ಕೇರ ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply