ಬಿಜೆಪಿ ಕಾರ್ಯಕಾರಿಣಿಗೆ ಯಡಿಯೂರಪ್ಪ ಚಾಲನೆ

ಮಂಗಳೂರು: ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಿಣಿ ಮಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಪ್ರಾರಂಭಗೊಂಡಿತು. ನಗರದ ರಮಣ ಪೈ ಸಭಾಂಗಣದಲ್ಲಿ ಸಭೆ ಬೆಳಗ್ಗೆಯಿಂದ ಸಂಜೆ ವರೆಗೆ ನಡೆಯಲಿದೆ. ಕಾರ್ಯಕಾರಿಣಿಯ ಉದ್ಘಾಟನೆಯನ್ನು ಸಿಎಂ ಯಡಿಯೂರಪ್ಪ ನೆರವೇರಿಸಿದರು  ಇದೇ ವೇಳೆ ಪಕ್ಷದ ಕೋರ್ ಕಮಿಟಿ ಸಭೆ ಕೂಡಾ ನಡೆಯಲಿದ್ದು ಹಿರಿಯ ನಾಯಕರು ಪಾಲ್ಗೊಳ್ಳುತ್ತಾರೆ. ಬೆಳಗ್ಗೆ . ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಮಾತನಾಡಿದ ಯಡಿಯೂರಪ್ಪ ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲಾಗುತ್ತಿದ್ದು ರಾಜ್ಯದಲ್ಲಿ ಇದಕ್ಕೆ ಕಡಿವಾಣ ಹಾಕ    ಲಾಗುತ್ತದೆ.  ಸಮಗ್ರವಾಗಿ ಚರ್ಚಿಸಿ ರಾಜ್ಯದಲ್ಲಿ ಇದಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗುವುದು. ಶಿರಾ, ಮತ್ತು ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಇದರಿಂದಾಗಿಯೇ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಚುನಾವಣಾ ಫಲಿತಾಂಶ ಕಾಂಗ್ರೆಸ್ಸಿಗರಿಗೆ ಉತ್ತರ ಸಿಗಲಿದೆ. ಆರ್ ನಗರದಲ್ಲಿ 40 ಸಾವಿರ, ಶಿರಾದಲ್ಲಿ 20 ಸಾವಿರ ಮತಗಳ ಅಂತರದಿಂದ ಬಿಜೆಪಿ ಜಯಗಳಿಸಲಿದೆ. ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದರು.

 
 
 
 
 
 
 
 
 
 
 

Leave a Reply