ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ

ಮೋದೀಜಿ ಜನ್ಮದಿನದ ಅಂಗವಾಗಿ ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ ನಡೆಯಿತು. ಅದರೊಂದಿಗೆ ನಮ್ಮ ಪಕ್ಷದ ಕಾರ್ಯಕರ್ತರಾದ ಚಂದ್ರ ಮಲ್ಲಾರ್ ಹಾಗೂ ಶೇಖ್ ನಝೀರ್ ಇವರು ಒಂದು‌ ದಿನ 5 ಕಿ.ಮೀ. ವರೆಗೆ ಸಾರ್ವಜನಿಕರಿಗೆ ಉಚಿತ ಸೇವೆ ನೀಡುವುದನ್ನು ಉದ್ಘಾಟಿಸಲಾಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಮತ್ತು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ ಪ್ರಧಾನ ಕಾರ್ಯದರ್ಶಿಗಳಾದ ನೀತಾ ಗುರುರಾಜ್ ಸುರೇಖ ಶೈಲೇಶ್ ಮತ್ತಿತರು ಉಪಸ್ಥಿತರಿದ್ದರು. ಪುರಸಭಾ ಸದಸ್ಯರುಗಳ ವಿಶೇಷ ಮುತುವರ್ಜಿಯಲ್ಲಿ ಈ ಕಾರ್ಯಕ್ರಮ ನಡೆದಿದ್ದು ಪುರಸಭಾ ಸದಸ್ಯರುಗಳಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ ಪಾದೂರು, ರತ್ನಾಕರ ಶೆಟ್ಟಿ, ನಾಗೇಶ್ ಶೈಲೇಶ್ ಅಮೀನ್ ಸರಿತಾ ಪೂಜಾರಿ, ಮತ್ತಿತರು ಉಪಸ್ಥಿತರಿದ್ದರು. ಯುವಮೋರ್ಚ ಪದಾಧಿಕಾರಿಗಳಾದ ಪ್ರವೀಣ್ ಪೂಜಾರಿ, ಸಚಿನ್ ಬೊಳ್ಜೆ ರಾಘವೇಂದ್ರ ರಾವ್ ಮತ್ತಿತರು, ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ಕಾರ್ಯಕರ್ತರು ಉಪಸ್ಥಿತರಿದ್ದರು. ‌

 
 
 
 
 
 
 
 
 
 
 

Leave a Reply