ಗ್ರಾಮಾಂತರ ಮಹಿಳಾ ಮೋರ್ಚಾದ 3ನೇ ಕಾರ್ಯಕಾರಿಣಿ ಸಭೆ

ಬ್ರಹ್ಮಾವರ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ಗ್ರಾಮಾಂತರ ಮಹಿಳಾ ಮೋರ್ಚಾದ 3ನೇ ಕಾರ್ಯಕಾರಿಣಿ ಸಭೆಯು ಬ್ರಹ್ಮಾವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರದಂದು ನಡೆಯಿತು. ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ಉದ್ಘಾಟಿಸಿ ಮುಂದಿನ ಕಾರ್ಯಯೋಜನೆ ಬಗ್ಗೆ ಮತ್ತು ಪ್ರತಿ ಬೂತ್ ಗಳಲ್ಲಿ ಐದು ಜನ ಮಹಿಳಾ ಕಾರ್ಯಕರ್ತರನ್ನು ನೇಮಕ ಮಾಡುವಂತೆ ಮಾಹಿತಿಯನ್ನು ನೀಡಿದರು.

ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಮಂಡಲದ ಪ್ರದಾನ ಕಾರ್ಯದರ್ಶಿ ಅಶೋಕ್ ಹೇರೂರು, ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷೆ ವಸಂತಿ ಸತೀಶ್ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಳಿನಿ ಪ್ರದೀಪ್, ಮಹಿಳಾಮೋರ್ಚಾದ ಪ್ರದಾನ ಕಾರ್ಯದರ್ಶಿಗಳಾದ ಶೋಭಾ ಪೂಜಾರಿ ಮತ್ತು ಸುಮತಿ ಪೂಜಾರಿ, ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸರ್ವ ಸದಸ್ಯರು, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರದಾನಕಾರ್ಯದರ್ಶಿಗಳು ಈ ಸಭೆಯಲ್ಲಿ ಹಾಜರಿದ್ದರು.

 
 
 
 
 
 
 
 
 

Leave a Reply