ಬೊಮ್ಮಾರಬೆಟ್ಟುವಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಉಡುಪಿ: ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಬೊಮ್ಮಾರಬೆಟ್ಟು ಗ್ರಾ.ಪಂ. ವ್ಯಾಪ್ತಿಯ 2ನೇ ವಾರ್ಡಿನಲ್ಲಿ ಪಕ್ಷದ ಧ್ವಜಾರೋಹಣ ಮಾಡಿ ಭಾರತ ಮಾತೆ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಮಾತನಾಡಿ, ಭಾರತೀಯ ಜನತಾ
ಪಾರ್ಟಿಯ ಹುಟ್ಟು, ಬೆಳವಣಿಗೆ, ಸಾಧನೆಗಳ ಯಶೋಗಾಥೆಯನ್ನು ವಿವರಿಸಿದರು. ಪಕ್ಷಕ್ಕಾಗಿ ತ್ಯಾಗ, ಬಲಿದಾನಗೈದಿರುವ ಹಿರಿಯ ಚೇತನಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬಿಜೆಪಿ ಬೂತ್ ಅಧ್ಯಕ್ಷ ಶಿಶಿರ್ ಪೂಜಾರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುನೀತಾ ನಾಯ್ಕ್, ತಾಲೂಕುಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಹರೀಶ್ ಸಾಲ್ಯಾನ್, ಹಿರಿಯಡ್ಕ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ
ಸಂದೀಪ್ ಶೆಟ್ಟಿ, ಗಾಮ ಪಂಚಾಯತ್ ಸದಸ್ಯರಾದ ಗೀತಾ ದಯಾನಂದ್, ಶಬರಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ದಯಾನಂದ್ ಪೂಜಾರಿ ಬಸ್ತಿ, ಗೋಪಾಲ್,
ಪ್ರಮುಖರಾದ ರವೀಂದ್ರ ಆಚಾರ್ಯ, ಶಿಲ್ಪಾ ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply