ಉಡುಪಿ: ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ರತ್ನಗಿರಿ ಭಾಗದಲ್ಲಿ ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ 7 ಮೀನುಗಾರರನ್ನು ರಕ್ಷಿಸಲಾಗಿದೆ. ಭಗವಾನ್ ದಾಸ್ ಕೋಟ್ಯಾನ್ ಅವರ ದಿವ್ಯಶಕ್ತಿ ಹೆಸರಿನ ಬೋಟ್ ಏ.10ರಂದು ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮಾಡುವಾಗ ಬೋಟ್ನ ತಳಭಾಗ ಅಪಘಾತಕ್ಕೆ ತುತ್ತಾಗಿ ಮುಳುಗಡೆಯಾಗಿದ್ದು, ಹತ್ತಿರದಲ್ಲಿದ್ದ ಇತರ ಬೋಟ್ಗಳವರು ನೆರವಿಗೆ ಧಾವಿಸಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಮೀನುಗಾರರನ್ನು ಮಲ್ಪೆ ಬಂದರಿಗೆ ಕರೆತರಲಾಗಿದೆ