“ಉಡುಪಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು”- ಪುಸ್ತಕ ಬಿಡುಗಡೆ

ಜಿ. ಶಂಕರ ಸರ್ಕಾರಿ ಮಹಿಳಾ ಕಾಲೇಜಿನ ಎಂ.ಎ. ಇತಿಹಾಸ ವಿಭಾಗದ ವಿದ್ಯಾರ್ಥಿನಿಯರು ರಚಿಸಿದ “ಉಡುಪಿ ಜಿಲ್ಲೆಯ ಸ್ವಾತಂತ್ರö್ಯ ಹೋರಾಟಗಾರರು” ಎಂಬ ಕೃತಿಯನ್ನು ಉಡುಪಿ ಜಿಲ್ಲಾಧಿಕಾರಿ ಶ್ರೀ ಕೂರ್ಮರಾವ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ ‘ಅಮೃತ ಭಾರತ’ ಮತ್ತು ‘ರಜತ ಉಡುಪಿ’ಯ ಈ ಸಮಯದಲ್ಲಿ ವಿದ್ಯಾರ್ಥಿನಿಯರೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಒಂದು ಪುಸ್ತಕವನ್ನು ಪ್ರಕಟಿಸಿರುವುದು ಅಭಿನಂದನೀಯ ಎಂದು ಹೇಳಿದರು. ಹಾಗೆಯೇ ಮುಂದೆ ಕೂಡ ಉಡುಪಿ ಜಿಲ್ಲೆಯ ವಿವಿಧ ಕೊಡುಗೆಗಳ ಬಗ್ಗೆ ವಿದ್ಯಾರ್ಥಿನಿಯರಿಂದ ಕೃತಿಗಳು ಹೊರಬರಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಎಸ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಇತಿಹಾಸ ಎಂ.ಎ. ವಿಭಾಗದ ಪ್ರಾದ್ಯಾಪಕ ಡಾ. ರಾಮದಾಸ ಪ್ರಭು ಮಾತನಾಡಿದರು. ಕೇಶವ ಮೂರ್ತಿ ಎಂ ಕಾರ್ಯಕ್ರಮವನ್ನು ನಿರೂಪಿಸಿ ವಂದಾನಾರ್ಪಣೆಗೈದರು.

 
 
 
 
 
 
 
 
 
 
 

Leave a Reply