ಬೆಂಗಳೂರು : ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನೋತ್ಸವ ಆರಂಭ

ಬೆಂಗಳೂರು : ಶ್ರೀ ಪೇಜಾವರ ಮಠದ ಪದ್ಮವಿಭೂಷಣ ಪುರಸ್ಕೃತ ಕೀರ್ತಿ ಶೇಷ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನೋತ್ಸವವು ಬೆಂಗಳೂರಿನ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದ ಆವರಣದಲ್ಲಿರುವ ಅವರ ಮೂಲ ವೃಂದಾವನ ಸನ್ನಿಧಿಯಲ್ಲಿ ಮಂಗಳವಾರ ಆರಂಭಗೊಂಡಿತು.

ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಈ ಮಹೋತ್ಸವವವು ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಾವಳಿಗಳ ಅನುಸಾರ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತಗೊಳಿಸಿ ಸರಳವಾಗಿ ನಡೆಸಲಾಗುತ್ತಿದೆ.

ಮಂಗಳವಾರ ಪೂರ್ವಾರಾಧನೆಯ ಅಂಗವಾಗಿ ವಿದ್ಯಾಪೀಠದ ಋತ್ವಿಜರಿಂದ ಶ್ರೀ ರಾಮ‌- ಕೃಷ್ಣ -ವೇದವ್ಯಾಸ – ನರಸಿಂಹ ಮಂತ್ರ ಹೋಮಗಳು ನೆರವೇರಿದವು . ಸಂಜೆ ವಿದ್ವತ್ಗೋ಼ಷ್ಠಿ ನಡೆಯಿತು .

ಬುಧವಾರ ಮಧ್ಯಾರಾಧನೆ ನಡೆಯಲಿದೆ . ಉಡುಪಿ ಹಾಗೂ ಮಂಗಳೂರಿನ ಸಮೀಪದ ಪೇಜಾವರದಲ್ಲಿನ ಮಠಗಳು ಮತ್ತು ಶ್ರೀ ವಿಶ್ವೇಶತೀರ್ಥರು ಉತ್ತರದ ಬದರಿಯಿಂದ ದಕ್ಷಿಣದ ರಾಮೇಶ್ವರದವರೆಗೆ ಸಂಸ್ಥಾಪಿಸಿದ ಎಲ್ಲ ಸಂಘ ಸಂಸ್ಥೆಗಳು ಹಾಗೂ ಶ್ರೀಮಠದ ಶಾಖೆಗಳಲ್ಲೂ ಆರಾಧನೆಯ ನಿಮಿತ್ತ ಧಾರ್ಮಿಕ ವಿಧಿಗಳಿಗೆ ಸೀಮಿತಗೊಳುಸಿ ಗುರು ಸ್ಮರಣೆ ನಡೆಯಲಿದೆ ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 

Leave a Reply