ವಲಸಿಗ ಶಾಸಕರಿಗೆ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್!

ಚಾಮರಾಜನಗರ : ಬಿಜೆಪಿಗೆ ಬಂದು ಸಚಿವರಾಗಿದ್ದ 17 ಶಾಸಕರಿಗೆ ಮಾಜಿ ಮುಖ್ಯಮಂತ್ರಿ ಬಿಗ್ ಶಾಕ್ ನೀಡಿದ್ದು, 17 ಶಾಸಕರಿಗೆ ಸಚಿವ ಸ್ಥಾನ ನೀಡುವುದು ಬಿಡುವುದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟ ನಿರ್ಧಾರ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಬಿಜೆಪಿಗೆ ಬಂದ 17 ಶಾಸಕರ ಬಗ್ಗೆ ನಾನು ಏನೂ ಹೇಳುವುದೂ ಇಲ್ಲ. ಅವರಿಗೆ ಸಚಿವ ಸ್ಥಾನ ಕೊಡುವುದು, ಬಿಡುವುದು ಸಿಎಂ ಬೊಮ್ಮಾಯಿಗೆ ಬಿಟ್ಟ ನಿರ್ಧಾರ.

ಸಂಪುಟ ರಚನೆಯಲ್ಲಿ ನಾನು ಯಾವುದೇ ಸಲಹೆಗಳನ್ನು ಕೊಡಲ್ಲ. ಸಂಪುಟ ರಚನೆಯಲ್ಲಿ ಬೊಮ್ಮಾಯಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಹಾಗಾಗಿ ಹೈಕಮಾಂಡ್ ಮತ್ತು ಸಿಎಂ ಸೇರಿ ಸಂಪುಟ ರಚನೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಪಕ್ಷವನ್ನು ಬಲಪಡಿಸಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಡುತ್ತೇನೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಡ್ಡಾರಿಗೆ ಇದು ನಾನು ನೀಡಿರುವ ಭರವಸೆ. ಗಣೇಶ ಚತುರ್ಥಿ ಬಳಿಕ ವಾರಕೊಂದು ಜಿಲ್ಲೆಯಂತೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.

 
 
 
 
 
 
 
 
 
 
 

Leave a Reply