ಚಲಿಸುತ್ತಿದ್ದ ಖಾಸಗಿ ಬಸ್ ವೊಂದು ಹೊತ್ತಿ ಉರಿದಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಹುಬ್ಬಳ್ಳಿ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ.
ಮುಂಬೈನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸುಖವಿಹಾರಿ ಖಾಸಗಿ ಬಸ್ ಕೆಎ ೫೧/ ೬೨೯೩ ರೇಷ್ಮಾ ಎಂಬ ಹೆಸರಿನ ಬಸ್ ಹೊತ್ತಿ ಉರಿದಿದೆ. ಬಸ್ ಚಲಿಸುತ್ತಿರುವಾಗ ಚಕ್ರಗಳು ಸಿಡಿದು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬಸ್ ಗೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನು ಬಸ್ ನಿಂದ ಕೆಳಗೆ ಇಳಿಸಲಾಗಿದೆ. ಹೀಗಾಗಿ ಯಾವುದೇ