ಅಪಘಾತ ತಪ್ಪಿಸುವ ಭರದಲ್ಲಿ ಬಸ್ ಪಲ್ಟಿ!

 ಮಂಗಳೂರಿನಿಂದ ಕಳಸಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಅಪಘಾತ ತಪ್ಪಿಸುವ ಭರದಲ್ಲಿ ಚಾಲಕನ‌ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಕಾರ್ಕಳ- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬನ್ನಡ್ಕ ಬಳಿ ನಡೆದಿದೆ.

ಘಟನೆಯಲ್ಲಿ ಬಸ್ ಚಾಲಕನ ಸೊಂಟಕ್ಕೆ ಗಾಯವಾಗಿದ್ದು, ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಮಂಗಳೂರಿನಿಂದ ಕಳಸಕ್ಕೆ ಹೋಗುವ ಕೆಕೆಬಿ ಬಸ್ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಅಧಿಕ ಪ್ರಯಾಣಿಕರಿದ್ದರು. ಬಸ್ ಬೆಳಿಗ್ಗೆ 6 ಗಂಟೆಗೆ ಮಂಗಳೂರಿನಿಂದ ಹೊರಟಿತ್ತು. ಮೂಡುಬಿದಿರೆ ಬೆಳುವಾಯಿ ಬಳಿಯ ಬನ್ನಡ್ಕದಲ್ಲಿ ರಿಕ್ಷಾವೊಂದು ಅಡ್ಡ ಬಂದಿತ್ತು. ರಿಕ್ಷಾಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ ನ್ನು ಪಕ್ಕಕ್ಕೆ ಸರಿಸಲು ಮುಂದಾದಾಗ ಬಸ್ ಪಲ್ಟಿಯಾಗಿದೆ.

 
 
 
 
 
 
 
 
 
 
 

Leave a Reply