ಬ್ರಹ್ಮಾವರ ಸಕ್ಕರೆ ಕಾರ್ಖಾನೆ: ಪುನರ್ ನಿರ್ಮಾಣಕ್ಕೆ ಬೆಂಬಲ: ಬಿ ವೈ ರಾಘವೇಂದ್ರ

ಬ್ರಹ್ಮಾವರ :ದ.ಕ.ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಬ್ರಹ್ಮಾವರ ಇದರ ಪುನರ್ ನಿರ್ಮಾಣದ ಬಗ್ಗೆ ಆಡಳಿತ ಮಂಡಳಿ ಕೈಗೊಳ್ಳುವ ಯೋಜನೆಗೆ ಬೆಂಬಲ ನೀಡಲಾಗುವುದೆಂದು ಶಿವಮೊಗ್ಗ ಲೋಕ ಸಭಾ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಇವರು ತಿಳಿಸಿದ್ದಾರೆ .

ಇತ್ತೀಚೆಗೆ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ಭೇಟಿಯಾದ ಕಾರ್ಖಾನೆಯ ನಿಯೋಗ ಪ್ರಸ್ತುತ ಕಾರ್ಖಾನೆಯ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಕಾರ್ಖಾನೆಯ ಅಭಿವೃದ್ಧಿಯ ದೃಷ್ಟಿಯಲ್ಲಿ ಕೈಗೊಳ್ಳುವ ಮುಂದಿನ ಯೋಜನೆಗಳನ್ನು ವಿವರಿಸಿ ಈ ಯೋಜನೆಗಳಿಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಆರ್ಥಿಕ ನೆರವು ಮತ್ತು ಅನುದಾನ ನೀಡಿ ಉಡುಪಿ- ದ. ಕ ಜಿಲ್ಲೆಯ ರೈತರ ಹಿತವನ್ನು ಕಾಪಾಡಬೇಕೆಂದು ಮನವಿ ಮಾಡಿದರು .

ಇದಕ್ಕೆ ಸ್ಪಂದಿಸಿದ ಸಂಸದರಾದ ಬಿ ವೈ ರಾಘವೇಂದ್ರ ಅವರು ಉಡುಪಿ ದ ಕ ಜಿಲ್ಲೆಯ ಜೀವನಾಡಿಯಾದ ಸಕ್ಕರೆ ಕಾರ್ಖಾನೆಯ ಪುನರ್ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರ ದಿಂದ ಸೂಕ್ತ ಆರ್ಥಿಕ ನೆರವು ನೀಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವು ದೆ0ದು ಭರವಸೆ  ನೀಡಿದರು.

ಈ ಸಂದರ್ಭ ಬೈಂದೂರಿನ ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಸನ್ಮತ್ ಕುಮಾರ್ ಹೆಗ್ಡೆ ,ಉದ್ಯಮಿ ರಾಧಾಕೃಷ್ಣ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು .

 
 
 
 
 
 
 
 
 
 
 

Leave a Reply