ನಾಗರಾಜ್ ಹೆಬ್ಬಾರ್ ಅವರ ಪ್ರವಾಸ ಕಥನ ‘ಚಾರಧಾಮ್ ಯಾತ್ರಾ’ ನಾಳೆ ಬಿಡುಗಡೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಉಡುಪಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ಆಶ್ರಯದಲ್ಲಿ ನಾಳೆ 12 ಮಂಗಳವಾರ ಸಂಜೆ 6:00ಕ್ಕೆ ಮರವಂತೆ ನಾಗರಾಜ್ ಹೆಬ್ಬಾರ್ ಅವರ ಪ್ರವಾಸ ಕಥನ ‘ಚಾರಧಾಮ್ ಯಾತ್ರಾ’* ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನ ಸಿಂಡ್ರೆಲಾ ಸಭಾಂಗಣದಲ್ಲಿ ಮಣಿಪಾಲ ಕೆ ಎಂ ಸಿಯ ಪ್ರೊಫೆಸರ್ ಡಾ. ಕಿರಣ್ ಆಚಾರ್ಯ ಅವರು ಬಿಡುಗಡೆ ಮಾಡಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಕೃತಿ ಪರಿಚಯವನ್ನು ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಲಕ್ಷ್ಮೀನಾರಾಯಣ ನೀಡಲಿದ್ದು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕರಾವಳಿ ಪ್ರವಾಸ ಉದ್ಯಮ ಸಂಘಟನೆಯ ಮನೋಹರ್ ಎಸ್ ಶೆಟ್ಟಿ , ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷರಾದ ಪ್ರೊಫೆಸರ್ ಶಂಕರ್ ಉಪಸ್ಥಿತರಿರುತ್ತಾರೆಂದು ಉಡುಪಿ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರವಿರಾಜ್ ಎಚ್.ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply