ಬೆಂಗಳೂರು: ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಟ ತಮ್ಮ ಸಾಮಾಜಿಕ ಜಾಲತಾಣದಲ್ಲಿ, ಬ್ರಾಹ್ಮಣರು ಭಯೋತ್ಪಾದಕರು ಎಂದು ಹೇಳಿದ್ದ ವಿಡಿಯೋವನ್ನ ಅಪ್ಲೋಡ್ ಮಾಡಿದ್ದರು.ಈ ಹೇಳಿಕೆಗೆ ಬ್ರಾಹ್ಮಣ ಸಮುದಾಯ ಖಂಡನೆ ವ್ಯಕ್ತಪಡಿಸಿ, ವಿಪ್ರ ಯುವ ವೇದಿಕೆಯಿಂದ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.ಐಪಿಸಿ 153(B) 295(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.