ಛತ್ತಿಸಗಡ: ಕೊರೋನಾ ಸೋಂಕಿನಿಂದ ಕರ್ತವ್ಯನಿರತ ಮಾಧ್ಯಮ ಸಿಬ್ಬಂದಿ ಮೃತಪಟ್ಟರೆ, ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವುದಾಗಿ ಛತ್ತೀಸ್ ಗಡ ಸರ್ಕಾರ ಘೋಷಣೆ ಮಾಡಿದೆ.
ಸರ್ಕಾರ ಈ ಬಗ್ಗೆ ಸೂಚನೆ ಹೊರಡಿಸಿದ್ದು, ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸೋಂಕಿನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಿದೆ .