ಸುದೀಪ್ ದಿಢೀರ್ ಸಿಎಂ ಭೇಟಿ ಕಿಚ್ಚನ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸುದೀಪ್ ಸಿನಿಮಾ ರಂಗ ದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಳ್ಳಿ ಹಬ್ಬ ಆಚರಿಸಲಾಯಿತು. ಈ ಸಮಾರಂಭದಲ್ಲಿ ಸಿಎಂ ಕೂಡ ಭಾಗವಹಿಸಿದ್ದರು. ಈ ನಿಮಿತ್ತ ಇಂದು ಬೆಳಗ್ಗೆ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಸುದೀಪ್ ಅಭಿನಂದನೆ ಸಲ್ಲಿದರು.