ಶಾಸಕ ರಘುಪತಿ ಭಟ್ ಇವರಿಂದ  ಸಿ.ಎಂ.ಬಿ.ಎಸ್ ಯಡಿಯೂರಪ್ಪರಿಗೆ ಅಭಿನಂದನೆ 

​ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ನೀಡಿದ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಭುಧವಾರ ಶಾಸಕ ಕೆ. ರಘುಪತಿ ಭಟ್ ಭೇಟಿಯಾಗಿ ಉಡುಪಿ ಜನತೆಯ ಪರವಾಗಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

 

ಕಳೆದ ಜುಲೈ ತಿಂಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2020-21ನೇ ಸಾಲಿನ ಆಯವ್ಯಯ ಮಂಡನೆ ಯಾಗಿ ನಡೆದ ಅಧಿವೇಶನದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಶಾಸಕ ಕೆ. ರಘುಪತಿ ಭಟ್ ಅವರು ಸದನದಲ್ಲಿ ವಿಷಯ ಮಂಡಿಸಿದಾಗ ಮುಖ್ಯಮಂತ್ರಿಯವರು ಉಡುಪಿ ಜಿಲ್ಲಾಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಭರವಸೆಯನ್ನು ನೀಡಿರುವಂತೆ ದಿನಾಂಕ 22-10-2020 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬೃಹತ್ ಯೋಜನೆಗೆ ಅನುಮೋದನೆ ನೀಡಿದ್ದರು.​
 
 
 
 
 
 
 
 
 
 
 

Leave a Reply