ಪತ್ರಕರ್ತನ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ಮಂಜೂರು

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಕೋವಿಡ್ ಸಂದರ್ಭದಲ್ಲಿ ಮೃತಪಟ್ಟಿದ್ದ ಬೆಂಗಳೂರು ಹಾಯ್ ಬೆಂಗಳೂರ್ ಪತ್ರಿಕೆಯ ಉಪಸಂಪಾದಕರಾಗಿದ್ದ ಅಶ್ವಿನ್ ಕುಮಾರ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಐದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಪತ್ರಕರ್ತ ಅಶ್ವಿನ್ ಕುಮಾರ್ ಅವರ ಸಾವಿನಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸ ಮಾಡಿಸಲು ಕಷ್ಟವಾಗಿರುವ ಬಗ್ಗೆ ಸಂಕಷ್ಟದಲ್ಲಿರುವ ಬಗ್ಗೆ ಬೆಂಗಳೂರು ನಗರ ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ಸಂಘದ ಗಮನಕ್ಕೆ ತಂದಿತ್ತು. ಹಿರಿಯ ಪತ್ರಕರ್ತ ಲಕ್ಷ್ಮಿಸಾಗರ ಸ್ವಾಮಿಗೌಡ ಅವರು ಆ ಕುಟುಂಬಕ್ಕೆ ಪರಿಹಾರ ಕೊಡಿಸುವಂತೆ ದಾಖಲಾತಿಗಳನ್ನು ಸಲ್ಲಿಸಿದ್ದರು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಮಂಜೂರು
ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ನಿರ್ದೇಶನ ಮಾಡಿದ್ದರು. ಸಿಎಂ ಸೂಚನೆ ಮೇರೆಗೆ ಬಿಬಿಎಂಪಿ ಆಯುಕ್ತರಾದ ಗೌರವ ಗುಪ್ತ ಅವರು ಅಶ್ವಿನ್ ಕುಟುಂಬಕ್ಕೆ ಪರಿಹಾರ ನೀಡಲು ಆದೇಶಿಸಿದ್ದಾರೆ.

ಪರಿಹಾರ ಮಂಜೂರು ಮಾಡಲು ಆದೇಶಿಸಿದ ಬಸವರಾಜ ಬೊಮ್ಮಾಯಿ ಅವರಿಗೆ, ಬಿಬಿಎಂಪಿ ಆಯುಕ್ತರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದದಿಂದ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

 
 
 
 
 
 
 
 
 
 
 

Leave a Reply