ಪತ್ರಕರ್ತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

ಉಡುಪಿ, ಎ.12: ಉಡುಪಿ ಪತ್ರಿಕಾ ಭವನದ ನಿರ್ವಹಣೆ, ಮೇಲಂತಸ್ತು ನಿರ್ಮಾಣಕ್ಕೆ ಅನುದಾನ ಸೇರಿದಂತೆ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿ ಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳವಾರ ಮಣಿಪಾಲದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪದಾಧಿಕಾರಿಗಳಾದ ಹರೀಶ್ ಸುವರ್ಣ, ಅಂಕಿತ್ ಶೆಟ್ಟಿ, ಸಂಜೀವ ಆರ್ಡಿ ಹಾಗೂ ಸಚಿವ ಸುನೀಲ್ ಕುಮಾರ್, ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್, ಸಿಇಓ ಡಾ.ನವೀನ್ ಭಟ್, ವಾರ್ತಾಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply