ಉಡುಪಿ ಲಯನ್ಸ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ಲಯನ್ಸ್ ಕ್ಲಬ್ ಉಡುಪಿಯ  ಶಿಕ್ಷಣ ಸೇವಾ ಕಾರ್ಯಕ್ರಮದ ಅಂಗವಾಗಿ  ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾರ್ಥಿ ವೇತನ ಪ್ರಾಯೋಜಿಸಿದ ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವರ್ವಾಡಿ  ಮಾತನಾಡಿ ಮಕ್ಕಳು ಉತ್ತಮ ಶಿಕ್ಷಣದ ಸದುಪಯೋಗ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯುವಂತೆ ಕರೆ ನೀಡಿದರು. ಲಯನ್ಸ್ ಕ್ಲಬ್ ವತಿಯಿಂದ ಉಡುಪಿ ಪರಿಸರದ ಇತರ ಹಲವು ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಒದಗಿಸುವ ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫೊರ್ ಎಜುಕೇಶನ್ ಅಧ್ಯಕ್ಷ ಎ. ಗಣಪತಿ ಕಿಣಿ ಅವರು ಪ್ರಸಾದ್ ಶೆಟ್ಟಿ ಅವರನ್ನು ಶಾಲು ಹೊದಿಸಿ ಅಭಿನಂದಿಸಿದರು. ಶಾಂತಿನಿಕೇತನ ಶಾಲಾ ಮುಖ್ಯೋಪಾಧ್ಯಾಯಿನಿ ರೂಪಾ ಡಿ. ಕಿಣಿ, ಲಯನ್ಸ್ ಜಿಲ್ಲಾ ಕೋ-ಆರ್ಡಿನೇಟರ್ (ರಿಲೀವಿಂಗ್ ದ ಹಂಗರ್) ರವಿರಾಜ್ ಯು.ಎಸ್., ಲಯನ್ಸ್ ಜಿಲ್ಲಾ ಛೇರ್‌ಪರ್ಸನ್ ವಿಷ್ಣುದಾಸ ಪಾಟೀಲ್ ಮತ್ತಿತರರು ಪಾಲ್ಗೊಂಡರು. ಲಯನ್ಸ್ ಕಾರ್ಯದರ್ಶಿ ಅಲೆವೂರು ದಿನೇಶ್ ಕಿಣಿ ಸ್ವಾಗತಿಸಿ, ಕೋಶಾಧಿಕಾರಿ ಲೂಯಿಸ್ ಲೋಬೊ ವಂದಿಸಿದರು.
 
 
 
 
 
 
 
 
 
 
 

Leave a Reply