ಮೀನು ಹಿಡಿಯಲು ತೆರಳಿದ ಯುವಕರಿಬ್ಬರು ನೀರುಪಾಲು

ಕಾರವಾರ: ಲಾಕ್‍ಡೌನ್ ವೇಳೆಯಲ್ಲಿ ಬೇಸರ ಕಳೆಯಲೆಂದು ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಅಂಕೋಲಾ ತಾಲೂಕಿನ ಬಸಾಕಲ್ ಗುಡ್ಡದ ಸಮೀಪ ನಡೆದಿದೆ.

ಚೇತನ ನಾಗೇಶ ನಾಯ್ಕ (23) ಮತ್ತು ಅಂಕೋಲಾದ ಬೆಳಾಬಂದರ್ ನಿವಾಸಿ ಸಂದೀಪ ಬೀರಪ್ಪ ನಾಯ್ಕ (30) ನೀರುಪಾಲಾದವರು. ಈ ಪೈಕಿ ಸಂದೀಪ ನಾಯ್ಕ ಮೃತ ದೇಹ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲಿಯೇ ಕುಳಿತು ಬೇಸರಗೊಂಡಿದ್ದ ಯುವಕರು ಮೀನು ಹಿಡಿಯಲೆಂದು ಬಸಾಕಲ್ ಸಮೀಪ ಸಮುದ್ರಕ್ಕೆ ತೆರಳಿದ್ದರು. ಆದರೆ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದ್ದು, ಇನ್ನಷ್ಟೆ ಈ ಬಗ್ಗೆ ಸ್ಪಷ್ಟ ಮಾಹಿತಿ ತಿಳಿಯಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಇನ್ನೊರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ.

 
 
 
 
 
 
 
 
 

Leave a Reply