ಉಡುಪಿ : ಕೊರೊನಾ ಸೋಂಕಿನಿಂದ ಶಿಕ್ಷಕಿಯೋರ್ವರು ಮೃತಪಟ್ಟಿದ್ದರು. ಆದರೆ ಕೊರೊನಾ ಸುದ್ದಿ ತಿಳಿಯುತ್ತಲೇ ಸಂಬಂಧಿಕರು ಅಂತ್ಯಕ್ರೀಯೆಗೆ ಹಾಜರಾಗಲು ಹಿಂದೇಟು ಹಾಕಿದ್ದಾರೆ. ಕೊನೆಗೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಶವ ಸಾಗಾಟ ಮಾಡುವ ಮೂಲಕ ಮಾನವೀಯತೆ ತೋರಿದ್ದಾರೆ.
ಕುಕ್ಕಿಕಟ್ಟೆಯ ಇಂದಿರಾನಗರದ ನಿವಾಸಿಯಾಗಿದ್ದ ಶಿಕ್ಷಕಿ ಸರೋಜ ಅಸೌಖ್ಯದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನ ಭೀತಿಗೊಳಗಾಗಿ ಕುಟುಂಬಿಕರು ಶವದ ಬಳಿ ಬರಲಿಲ್ಲ.
ನಂತರ ಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯಿಂದ ತಮ್ಮ ಆಂಬ್ಯುಲೆನ್ಸ್ ನಲ್ಲಿ ಶವ ಸಾಗಿಸಿದರು.ಯಶೋಧಾಮ ಆಟೋ ಯೂನಿಯನ್ ಕಾರ್ಯಕರ್ತರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ.