ಗಂಗೊಳ್ಳಿ : ಬೈಕ್ ಗೆ ಲಾರಿ ಡಿಕ್ಕಿ; ಸವಾರ ಸಾವು!

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ಆರಾಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ರಾಹುಲ್ ಬಾಲಕೃಷ್ಣ ರಣಕಂಬೆ ಎಂದು ಗುರುತಿಸಲಾಗಿದೆ. ಮೂಲತಃ ಮಹಾರಾಷ್ಟ್ರದವರಾದ ರಾಹುಲ್ ಅವರು, ಮರವಂತೆ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಶನಿವಾರ ಸಂಜೆ ಬ್ಯಾಂಕಿನ ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಕುಂದಾಪುರದ ಮನೆಗೆ ತೆರಳುತ್ತಿದ್ದ ವೇಳೆ ಆರಾಟೆ ಬಸ್ ನಿಲ್ದಾಣದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪರಿಣಾಮ ರಾಹುಲ್ ಅವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply