ಕಾರ್ಕಳ ದೂಪದಕಟ್ಟೆ ಸಮೀಪ ಪರ್ಪಲೆ ಕೆಇಬಿ ಬಳಿ ಬೈಕೊಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಓರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಫೆ.22 ರಂದು ನಡೆದಿದೆ.
ಮೂಲತಃ ಉಡುಪಿ ಜಿಲ್ಲೆ ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್ (18) ಮೃತ ದುರ್ದೈವಿ. ಗಂಭೀರ ಗಾಯಗೊಂಡ ಇನ್ನೋರ್ವ ಯುವಕನನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಕಾಶ್ ನಿಟ್ಟೆ ಕಾಲೇಜಿನ ಪ್ರಥಮ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ. ನಿಟ್ಟೆ ಕಾಲೇಜಿನಿಂದ ಕಾರ್ಕಳಕ್ಕೆ ಹಿಂದಿರುಗಿ ಹೋಗುವ ವೇಳೆ ಈ ಘಟನೆ ಸಂಭವಿಸಿದೆ. ಅತೀ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.