ಬ್ರಹ್ಮಾವರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಅಸು ನೀಗಿದ್ದು ದೇಹ ಛಿದ್ರ ಛಿದ್ರವಾಗಿ ಬಿದ್ದ ಘಟನೆ ಸಂಭವಿಸಿದೆ.
ಶೇಖರ್ ಎಂಬವರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಎಕ್ಸ್ಪ್ರೆಸ್ ಬಸ್ ಅವರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಅವರ ದೇಹ ಛಿದ್ರವಾಗಿ ರಸ್ತೆಯಲ್ಲಿ ಬಿದ್ದಿದೆ.
ಕುಂದಾಪುರದಿಂದ ಉಡುಪಿ ಕಡೆ ಬಸ್ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿದೀಪ ಇಲ್ಲದೆ ಈ ಅಪಘಾತ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.