ಬಸ್ಸಿನ ಚಕ್ರದಡಿಗೆ ಸಿಲುಕಿ ವ್ಯಕ್ತಿ ಸಾವು

ಭಾನುವಾರ ಸಂಜೆ ವ್ಯಕ್ತಿಯೊಬ್ಬರು ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಬಸ್ಸಿನ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿಯನ್ನು ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ. ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸಿಗೆ ತೆರಳಲು ಬಸ್ಸು ಹತ್ತುವ ಸಂದರ್ಭ ಆಯತಪ್ಪಿ ಬಿದ್ದು ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ತಕ್ಷಣವೇ ಅವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

 
 
 
 
 
 
 
 
 
 
 

Leave a Reply