ಉಡುಪಿ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು, ಎಲ್ಲರೂ ಅಪಾಯದಿಂದ ಪಾರಾದ ಘಟನೆ ಸಂತೆಕಟ್ಟೆಯಲ್ಲಿ ಸೋಮವಾರ ನಡೆದಿದೆ. ಲಾರಿ ಸಹಿತ ಚಾಲಕ ಪರಾರಿಯಾಗಿದ್ದಾನೆ.
ಸಂತೆಕಟ್ಟೆ ಜಂಕ್ಷನ್ ಬಳಿಯಿಂದ ಬ್ರಹ್ಮಾವರದತ್ತ ತೆರಳುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿತ್ತು. ಕಾರಿನಲ್ಲಿ ಚಾಲಕ ಸಹಿತ ಇಬ್ವರು ವಿದ್ಯಾರ್ಥಿಗಳಿದ್ದರು. ಸಂಚಾರ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.