ಹೆಜಮಾಡಿ: ಸ್ಕೂಟರ್-ಟ್ಯಾಂಕರ್ ಡಿಕ್ಕಿ; ದಂಪತಿ ಸ್ಥಳದಲ್ಲೇ ಮೃತ್ಯು!

ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪುವಿನ ಹೆಜಮಾಡಿ ಗ್ರಾಮದ ಶಾಂಭವಿ ನದಿಯ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ.

ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ ಅಕ್ಬರ್ ಬಾಷಾ(63) ಹಾಗೂ ಖತೀಜಾಬಿ (53) ಮೃತ ದಂಪತಿಗಳು. ಮಂಗಳೂರಿನ ಪಾಸ್ ಪೋರ್ಟ್ ಕಚೇರಿಯಲ್ಲಿ ಇಂದು ಪಾಸ್ಪೋರ್ಟ್ ರಿನೀವಲ್ ಮಾಡಲಿಕ್ಕೆ ಸಮಯ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ದಂಪತಿಗಳು ಸ್ಕೂಟರಿನಲ್ಲಿ ತೀರ್ಥಹಳ್ಳಿಯಿಂದಲೇ ಉಡುಪಿ ಮಾರ್ಗವಾಗಿ ಮಂಗಳೂರಿನತ್ತ ಹೊರಟಿದ್ದರು. ಈ ವೇಳೆ ಕಾಪುವಿನ ಹೆಜಮಾಡಿ ಗ್ರಾಮದ ಶಾಂಭವಿ ನದಿಯ ಸೇತುವೆ ಮೇಲೆ ಹೋಗುತ್ತಿರುವಾಗ ಟ್ಯಾಂಕರನ್ನು ಹೆಜಮಾಡಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಅದರ ಚಾಲಕ ಎದುರುಗಡೆಯಿಂದ ಸೇತುವೆಯ ಮೇಲೆ ಎಡ ಬದಿಯಲ್ಲಿ ಅಕ್ಬರ್ ಬಾಷಾರವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್‍ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಕೂಟರ್ ಸವಾರ ಅಕ್ಬರ್ ಬಾಷಾ ಹಾಗೂ ಸಹ ಸವಾರೆ ಖತೀಜಾಬಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply