ಆಸ್ಕರ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದ ಅದಮಾರು ಶ್ರೀಗಳು

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಲು ಉಡುಪಿ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಶನಿವಾರ ಆಸ್ಪತ್ರೆಗೆ ಆಗಮಿಸಿದ್ದರು.ಆಸ್ಕರ್ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು. 

ಗುರುಗಳಾದ ಶ್ರೀ ವಿಬುಧೇಶತೀರ್ಥ ಶ್ರೀಪಾದರಿಗೆ ಆಸ್ಕರ್ ತಂದೆ ರೋಕಿ ಫೆರ್ನಾಂಡಿಸ್ ಶಿಕ್ಷಕರಾಗಿದ್ದರು. ಶ್ರೀಮಠದೊಂದಿಗೆ ಆಸ್ಕರ್ ಉತ್ತಮ ಸಂಬಂಧ ಹೊಂದಿದ್ದಾರೆ. ನಾಡು ಕಂಡ ಶ್ರೇಷ್ಠ ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್ ಬೇಗನೇ ಗುಣಮುಖರಾಗಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.

 
 
 
 
 
 
 
 
 
 
 

Leave a Reply