ಶಾಸಕ ರಘುಪತಿ ಭಟ್ ಮನವಿ ಮೇರೆಗೆ ಶ್ರೀ ಲಕ್ಷ್ಮೀವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲೀ. ಆಂಬುಲೆನ್ಸ್ ಕೊಡುಗೆ

ಉಡುಪಿ : ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕಾರಿಯಾಗಲು ಆಂಬುಲೆನ್ಸ್ ನೀಡುವಂತೆ ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲಿಮಿಟೆಡ್ ಅವರಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಮನವಿ ಮಾಡಿರುವಂತೆ ಇಂದು ಶಾಸಕ ಕೆ ರಘುಪತಿ ಭಟ್ ಹಾಗೂ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಸಮ್ಮುಖದಲ್ಲಿ ರೂ.16,50,000 ಮೊತ್ತದ ಆಂಬುಲೆನ್ಸ್ ಅನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಿದರು.

ಉಡುಪಿ ನಗರಾಭಿವೃದ್ಧ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷ ಎಂ. ಶ್ರೀನಿವಾಸ್ ಭಟ್, ಮತ್ಸ್ಯೋದ್ಯಮಿ ಹರಿಯಪ್ಪ ಕೋಟ್ಯಾನ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕ ಮಧುಸೂದನ್ ನಾಯಕ್ ಮತ್ತು ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply