ಉಪ್ಪೂರು ಹೇರಾಯಿಬೆಟ್ಟು ಕಿಂಡಿ ಅಣೆಕಟ್ಟು – ಸಣ್ಣ ನೀರಾವರಿ ಸಚಿವರೊಂದಿಗೆ ಶಾಸಕ ರಘುಪತಿ ಭಟ್ ಪರಿಶೀಲನೆ

ಉಡುಪಿ: ವಿಧಾನಸಭಾ ಕ್ಷೇತ್ರದ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರಾಯಿಬೆಟ್ಟು ಎಂಬಲ್ಲಿ ಸ್ಥಳೀಯರ ಬೇಡಿಕೆಯಂತೆ ಶಾಸಕ ಕೆ. ರಘುಪತಿ ಭಟ್ ರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 35.00 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಯ ಸ್ಥಿತಿಗತಿಯ ಬಗ್ಗೆ ಇಂದು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಯೊಂದಿಗೆ ಶಾಸಕ ಕೆ. ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ರಘುರಾಮ್ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಸದಸ್ಯ ವಸಂತಿ ಬೈಕಾಡಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮೀ, ಕಾರ್ಯಪಾಲಕ ಅಭಿಯಂತರ ಗೋಕುಲ್ ದಾಸ್, ಸಹಾಯಕ ಕಾರ್ಯಪಾಲಕ ಅಭಿಯಂತರ ಶೇಷ ಕೃಷ್ಣ, ಗುತ್ತಿಗೆದಾರ ರಾಜೇಶ್ ಕಾರಂತ್ ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply