ಆಶಾ ಕಾರ್ಯಕರ್ತೆ ಕಲ್ಪನಾ ಜಿ.ಗೆ ಸನ್ಮಾನ

ಉಡುಪಿ : ಕಳೆದ 12 ವರ್ಷಗಳಿಂದ ಆಶಾ ಕಾರ್ಯಕರ್ತೆ ಯಾಗಿ ಮತ್ತು ಕೋವಿಡ್ ಸಮಯದಲ್ಲಿ ನಿರಂತರವಾಗಿ ಸೇವಾ ಮನೋಭಾವನೆಯೊಂದಿಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಉತ್ತಮವಾದ ನಿರ್ವಹಣೆಯನ್ನು ತೋರಿದ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಸುಗಮಕಾರರಾದ ಕಲ್ಪನಾ ಜಿ ಆರ್. ಪ್ರಭಾಕರ್ ಅವರನ್ನು ಇತ್ತೀಚೆಗೆ ಕುಂದಾಪುರದಲ್ಲಿ ನಡೆದ ಕಾರ್ಟೂನು ಹಬ್ಬದಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

 ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಮನೋವೈದ್ಯ ಡಾ. ಪಿ ವಿ ಭಂಡಾರಿ, ಹಿರಿಯ ಪತ್ರಕರ್ತ ಡಾ. ವೆಂಕಟೇಶ್, ಲೇಖಕ ಸತೀಶ್ ಶೆಟ್ಟಿ, ಕಾರ್ಟೂನಿಸ್ಟ್ ಸತೀಶ್ ಆಚಾರ್ಯ, ಪತ್ರಕರ್ತ ಅವಿನಾಶ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply