ಮತ್ಸ್ಯೋದ್ಯಮಿ ಆನಂದ್ ಪಿ. ಸುವರ್ಣರಿಂದ ಬಡಾನಿಡಿಯೂರು ಗ್ರಾಮ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನ’ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಬಡಾನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 5 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ಆರ್ಯನ್ ಹೋಟೆಲ್ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಮತ್ಸ್ಯೋದ್ಯಮಿ ಆನಂದ್ ಪಿ. ಸುವರ್ಣ ಹಾಗೂ ಟಿ. ಓ.ಪಿ.ಎಫ್ ಗುಜ್ಜರಬೆಟ್ಟು ಮಾಲಕ ರಫೀಕ್ ಸಾಹೇಬ್, ಶಾಸಕ ಕೆ. ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೆಡುವ ಮೂಲಕ ಕೈ ನಾಟಿಗೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.ಈ ಭಾಗದಲ್ಲಿ ಹಡಿಲು ಭೂಮಿ ಆಂದೋಲನಕ್ಕೆ ಸಹಕರಿಸಿದ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಸ್ಥಳೀಯರಿಗೆ ಶಾಸಕ ಕೆ. ರಘುಪತಿ ಭಟ್ ಅಭಿನಂದನೆ ಸಲ್ಲಿಸಿದರು.

ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ್ ತಿಂಗಳಾಯ, ಉಪಾಧ್ಯಕ್ಷ ಶೀಲಾ, ಹಿರಿಯ ಕೃಷಿಕ ಬಿ.ಪಿ ರಮೇಶ್ ಪೂಜಾರಿ, ಬಡಾನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಉಮೇಶ್ ಪೂಜಾರಿ, ಸ್ಥಳೀಯರಾದ ದಿನಕರ್ ಮಾಸ್ಟರ್, ಸಂಜೀವಿನಿ ತಂಡದ ಅಧ್ಯಕ್ಷರಾದ ಲತಾ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸದಸ್ಯ ದಿನಕರ್ ಬಾಬು, ಬಡಾನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ತಂಡದ ಸದಸ್ಯರು, ಸ್ಥಳೀಯ ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply