ಬೈಲೂರು : ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಹಿಷಮರ್ಧಿನಿ ದೇವಸ್ಥಾನ ರಸ್ತೆಯನ್ನು
ಅಗಲೀಕರಣಗೊಳಿಸಿ, ರಸ್ತೆ ಕಾಂಕ್ರೀಟೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ನಗರಸಭೆ ಹಾಗೂ ಪಿ.ಡ್ಲೂö್ಯಡಿ ಇಲಾಖೆ ವತಿಯಿಂದ ನಿರ್ವಹಿಸುತ್ತಿದ್ದು, ಸದ್ರಿ ರಸ್ತೆಯಲ್ಲಿ ಆಗಸ್ಟ್ 6 ರಿಂದ ಸೆಪ್ಟಂಬರ್ 5 ರ ವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿರುತ್ತದೆ.
ಬದಲಿ ಮಾರ್ಗವಾಗಿ ಕಿನ್ನಿಮೂಲ್ಕಿ ಗೋಪುರದಿಂದ ಬಲೈಪಾದೆ ಜಂಕ್ಷನ್‌ನಿAದ ಮುಂದೆ ಎಡಕ್ಕೆ ಹಾಗೂ ಚಿಟ್ಪಾಡಿ ಹನುಮಾನ್ ಗ್ಯಾರೇಜ್ ರಸ್ತೆಯಿಂದ ವಾಹನಗಳು ಸಂಚರಿಸಬಹುದಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply