ಬಂಟ್ವಾಳ : ಜೀಪ್ ಹಾಗೂ ಸ್ಕೂಟರ್ ಡಿಕ್ಕಿಯಲ್ಲಿ ಸ್ಕೂಟರ್ ಸವಾರ ಸಾವು

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಳಿ ಜೀಪ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಾವೂರದಲ್ಲಿ ನಡೆದಿದೆ.

ಸಾವನ್ನಪ್ಪಿದ ವ್ಯಕ್ತಿ ನಾವೂರ ನಿವಾಸಿ ಅಬ್ಬಾಸ್ ಎನ್ನಲಾಗಿದೆ. ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಅಬ್ಬಾಸ್ ಗಂಭೀರ ಗಾಯಗೊಂಡು,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸ್ಥಳಕ್ಕೆ ಮೆಲ್ಕಾರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 
 
 
 
 
 
 
 
 
 
 

Leave a Reply