ಮಂಗಳೂರು : ಅಸಂಘಟಿತ ಪುರೋಹಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ದ.ಕ ಹಾಗೂ ಉಡುಪಿ ಜಿಲ್ಲಾ ಘಟಕ ಪಣಂಬೂರಿನ ನಂದನೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಉದ್ಘಾಟನೆಗೊಂಡಿದೆ. ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸಂಘಟನೆಯ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಸಂಘಟನೆಯ ಧ್ಯೇಯೋದ್ದೇಶಗಳನ್ನು ಆಲಿಸಿದರು.
ಉಪಮೇಯರ್ ಸುಮಂಗಲಾ, ಸಂಘದ ಅಧ್ಯಕ್ಷ ಪ್ರಕಾಶ್ ಹೊಳ್ಳ, ಉಪಾಧ್ಯಕ್ಷ ಸುಭಾಷ್ ಪರಾಂಜಪೆ, ಗೌರವಾಧ್ಯಕ್ಷ ರಘುರಾಮ ರಾವ್ ಕೆ., ಸುಬ್ರಹ್ಮಣ್ಯ ಮಯ್ಯ, ಸೂರ್ಯ ನಾರಾಯಣ್ ಐತಾಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.