ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ

ವಿಜಯ ಸಂಕಲ್ಪ ಅಭಿಯಾನ ದ ಪೂರ್ವಭಾವಿ ಸಭೆ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಳೆದ ಹತ್ತು ದಿನಗಳ ಕಾಲ ನಡೆದ ಬೂತ್ ವಿಜಯ ಅಭಿಯಾನದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ಮುಂದೆ ಜ.21 ರಿಂದ ಜ.29 ರವರೆಗೆ ನಡೆಯುವ ವಿಜಯ ಸಂಕಲ್ಪ ಅಭಿಯಾನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪಕ್ಷದ ವಿವಿಧ ಪದಾಧಿಕಾರಿಗಳು ಅಪೇಕ್ಷಿತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply